Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:13 - ಪರಿಶುದ್ದ ಬೈಬಲ್‌

13 ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ದೇವರೇ, ಅವರನ್ನು ಗಾಳಿಯಲ್ಲಿ ಸುತ್ತಿಯಾಡುವ ಧೂಳಿನಂತೆಯೂ ಹಾರಿಹೋಗುವ ಹೊಟ್ಟಿನಂತೆಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:13
15 ತಿಳಿವುಗಳ ಹೋಲಿಕೆ  

ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


“ನಾನು ನಿಮಗೆ ನಿಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತಾಗುವಿರಿ.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ಒಣಗಿದ ಎಲೆಯಂತಿರುವ ನನ್ನನ್ನು ಹೆದರಿಸುವಿಯಾ? ಹುಲ್ಲುಕಡ್ಡಿಯಂತಿರುವ ನನ್ನ ಮೇಲೆ ಆಕ್ರಮಣ ಮಾಡುವಿಯಾ?


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು.


ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?


ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.


“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.


ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು