Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:4 - ಪರಿಶುದ್ದ ಬೈಬಲ್‌

4 ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆಯೂ ಅವರನ್ನು ಸಂಹರಿಸೋಣ ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:4
14 ತಿಳಿವುಗಳ ಹೋಲಿಕೆ  

ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.


ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನ್ನು ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತುಹೋಗುವುದು.”


ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.


ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.


ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು.


ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು