Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:7 - ಪರಿಶುದ್ದ ಬೈಬಲ್‌

7 ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:7
20 ತಿಳಿವುಗಳ ಹೋಲಿಕೆ  

ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ನಿನ್ನ ಬೆಳಕೂ ಸತ್ಯವೂ ನನ್ನ ಮೇಲೆ ಪ್ರಕಾಶಿಸಲಿ. ನಿನ್ನ ಬೆಳಕೂ ಸತ್ಯವೂ ನನಗೆ ಮಾರ್ಗದರ್ಶನ ನೀಡಲಿ. ಅವು ನನ್ನನ್ನು ನಿನ್ನ ಪವಿತ್ರ ಪರ್ವತಕ್ಕೂ ನಿನ್ನ ನಿವಾಸಕ್ಕೂ ನಡೆಸುತ್ತವೆ.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.


ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.


ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.


ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು