Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:9 - ಪರಿಶುದ್ದ ಬೈಬಲ್‌

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನೀನು ಅಭಿಷೇಕಿಸಿದವನಿಗೆ ಕರುಣೆತೋರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:9
16 ತಿಳಿವುಗಳ ಹೋಲಿಕೆ  

ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ” ಎಂದು ಪ್ರಾರ್ಥಿಸಿದನು.


ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.


ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು