Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:16 - ಪರಿಶುದ್ದ ಬೈಬಲ್‌

16 ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. ನಿನ್ನ ಸೇವಕನ ಮಗನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ. ನಿಮ್ಮ ಸೇವಕನಿಗೆ ನಿಮ್ಮ ಬಲವನ್ನು ತೋರಿಸಿರಿ. ನನ್ನ ತಾಯಿ ನಿನ್ನ ಸೇವೆಮಾಡಿದಂತೆ ನಾನು ಸಹ ಸೇವೆಮಾಡುವುದರಿಂದ ನನ್ನನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:16
18 ತಿಳಿವುಗಳ ಹೋಲಿಕೆ  

ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!


ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. ನನಗೆ ಅಭಿಮುಖನಾಗಿ ಕರುಣೆತೋರು.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.


ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.


ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.


ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.


ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.


ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು