Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:12 - ಪರಿಶುದ್ದ ಬೈಬಲ್‌

12 ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಿಳಿವರೆ ನಿನ್ನ ಪವಾಡಗಳನು ಇರುಳ ನಿಶೆಯೊಳು? I ನಿನ್ನ ನ್ಯಾಯ ನೀತಿಯನು ಮರೆವಾ ಲೋಕದೊಳು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ ಮರವೆಯ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:12
10 ತಿಳಿವುಗಳ ಹೋಲಿಕೆ  

ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.


ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.


ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.


ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು