Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:5 - ಪರಿಶುದ್ದ ಬೈಬಲ್‌

5 ಸತ್ತವರ ಮಧ್ಯದಲ್ಲಿ ನನಗಾಗಿ ಹುಡುಕು. ಸಮಾಧಿಯಲ್ಲಿ ಬಿದ್ದಿರುವ ಶವದಂತಾಗಿದ್ದೇನೆ, ನೀನು ಮರೆತುಬಿಟ್ಟ ಸತ್ತ ಜನರಂತೆ ಆಗಿದ್ದೇನೆ. ನಿನ್ನಿಂದಲೂ ನಿನ್ನ ಪರಿಪಾಲನೆಯಿಂದಲೂ ದೂರವಾದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇರುವೆ ಹತನಾಗಿ ಸಮಾಧಿ ಸೇರಿದವನಂತೆ I ಮೃತರಾದವರೊಳು ನಿರಾಕೃತನಾದವನಂತೆ II ನಿನ್ನಾ ನೆನಕೆಯಿಂದ ಅಳಿದು ಹೋದವನಂತೆ I ನಿನ್ನಾ ಪಾಲನೆಯಿಂದ ದೂರವಾದವನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಸಮಾಧಿಯಲ್ಲಿ ಬಿದ್ದಿರುವ ಹತರಂತಿದ್ದೇನೆ. ಅವರು ನಿನ್ನ ಪರಿಪಾಲನೆಗೆ ಹೊರಗಾದವರು; ಅಂಥವರನ್ನು ನೀನು ಜ್ಞಾಪಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹತರಾದವರು ಸಮಾಧಿಯಲ್ಲಿ ಮಲಗಿದಂತೆ ನಾನೂ ಸತ್ತವರೊಂದಿಗೆ ಸೇರಿರುತ್ತೇನೆ. ಅವರನ್ನು ನೀನೆಂದೂ ಜ್ಞಾಪಿಸಿಕೊಳ್ಳುವುದಿಲ್ಲ. ನಿಮ್ಮ ಪರಿಪಾಲನೆಯಿಂದ ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:5
15 ತಿಳಿವುಗಳ ಹೋಲಿಕೆ  

ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು. ಆತನ ಪ್ರೀತಿ ಶಾಶ್ವತವಾದದ್ದು.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ.


“ದೇವರು ನಿನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಎಳೆದುಕೊಂಡು ಬರುವುದಾದರೆ ಆತನನ್ನು ತಡೆಯಬಲ್ಲವರು ಯಾರು?


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.


“ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ.


ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು