Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:15 - ಪರಿಶುದ್ದ ಬೈಬಲ್‌

15 ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:15
21 ತಿಳಿವುಗಳ ಹೋಲಿಕೆ  

ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.


ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು.


ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!


ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.’”


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”


ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.”


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.


ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು