Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:27 - ಪರಿಶುದ್ದ ಬೈಬಲ್‌

27 ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:27
17 ತಿಳಿವುಗಳ ಹೋಲಿಕೆ  

ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.


ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ಆಗ ನೀನು ಫರೋಹನಿಗೆ, ‘ಇಸ್ರೇಲ್ ಜನಾಂಗವು ಯೆಹೋವನಿಗೆ ಚೊಚ್ಚಲು ಮಗನಂತಿದೆ.


ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.


ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.


ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ.


ನೀನೇ ನನ್ನ ಸಂರಕ್ಷಣೆಯ ಆಶ್ರಯಗಿರಿಯಾಗಿರು. ನನ್ನನ್ನು ರಕ್ಷಿಸಲು ಆಜ್ಞಾಪಿಸು. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು