Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:46 - ಪರಿಶುದ್ದ ಬೈಬಲ್‌

46 ಯೆಹೋವನೇ, ಇನ್ನೆಷ್ಟರವರೆಗೆ ನೀನು ನಮಗೆ ಮರೆಯಾಗಿರುವೆ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಶಾಶ್ವತವಾಗಿ ಉರಿಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:46
17 ತಿಳಿವುಗಳ ಹೋಲಿಕೆ  

ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?


ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಯೆಹೋವನೇ, ನೀನು ನನ್ನನ್ನು ತೊರೆದುಬಿಟ್ಟಿದ್ದೇಕೆ? ನೀನು ನನಗೆ ಕಿವಿಗೊಡದಿರುವುದೇಕೆ?


ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.


ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ.


ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!


“ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು