Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:48 - ಪರಿಶುದ್ದ ಬೈಬಲ್‌

48 ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:48
15 ತಿಳಿವುಗಳ ಹೋಲಿಕೆ  

ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.


ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.


ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ನಾನು ಇನ್ನೆಷ್ಟುಕಾಲ ಬದುಕಲಿ? ನನ್ನನ್ನು ಹಿಂಸಿಸುವವರನ್ನು ಯಾವಾಗ ದಂಡಿಸುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು