Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:19 - ಪರಿಶುದ್ದ ಬೈಬಲ್‌

19 ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:19
23 ತಿಳಿವುಗಳ ಹೋಲಿಕೆ  

ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು.


ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.


ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!


ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!


ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ.


ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು.


ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.”


ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.


ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.


ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು