Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:8 - ಪರಿಶುದ್ದ ಬೈಬಲ್‌

8 ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜಗಕೆ ನ್ಯಾಯ ತೀರಿಸುವನು ನೀತಿಗನುಸಾರ I ಜನಾಂಗಕೆ ತೀರ್ಪು ಕೊಡುವನು ಸತ್ಯಕ್ಕನುಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯತೀರಿಸುವವನು; ಆತನು ಜನಾಂಗಗಳಿಗೆ ಸತ್ಯವಾಗಿಯೇ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:8
15 ತಿಳಿವುಗಳ ಹೋಲಿಕೆ  

ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


“ಯೆಹೋವನು ಎಂದೆಂದಿಗೂ ಆಳುವನು!”


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು