Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:5 - ಪರಿಶುದ್ದ ಬೈಬಲ್‌

5 ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಅಂಜಬೇಕಾಗಿಲ್ಲ ಇರುಳಿನ ದುರಿತಕೆ I ಹಗಲಿನಲಿ ಹಾರಿಬರುವ ಬಿರುಸು ಬಾಣಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇರುಳಲ್ಲಿ ಭಯಹುಟ್ಟಿಸುವ ಯಾವದಕ್ಕೂ ಹಗಲಲ್ಲಿ ಹಾರಿಬರುವ ಬಾಣಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:5
19 ತಿಳಿವುಗಳ ಹೋಲಿಕೆ  

ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.


ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.


ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು