Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:1 - ಪರಿಶುದ್ದ ಬೈಬಲ್‌

1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:1
30 ತಿಳಿವುಗಳ ಹೋಲಿಕೆ  

ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.


ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.


ಸ್ವಬಲದಿಂದ ಪರ್ವತಗಳನ್ನು ನಿರ್ಮಿಸಿದಾತನು ದೇವರೇ. ಆತನು “ಶೌರ್ಯ” ಎಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾನೆ.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ.


ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.


ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.


ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು