Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಪ್ರಕಾಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:1
14 ತಿಳಿವುಗಳ ಹೋಲಿಕೆ  

ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.


ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ” ಎಂಬುದಾಗಿ ಬರೆಯಲ್ಪಟ್ಟಿದೆ.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


“ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು