Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:10 - ಪರಿಶುದ್ದ ಬೈಬಲ್‌

10 ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಜನಾಂಗಗಳನ್ನು ಶಿಕ್ಷಿಸುವವನೂ ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:10
23 ತಿಳಿವುಗಳ ಹೋಲಿಕೆ  

‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.


ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.


ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ಸಿಟ್ಟಿನಿಂದ ನೀನು ಭೂಮಿಯ ಮೇಲೆ ನಡೆದೆ. ಮತ್ತು ಜನಾಂಗಗಳನ್ನು ಶಿಕ್ಷಿಸಿದೆ.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ.


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.


ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು