Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:16 - ಪರಿಶುದ್ದ ಬೈಬಲ್‌

16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:16
19 ತಿಳಿವುಗಳ ಹೋಲಿಕೆ  

“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


ಆದ್ದರಿಂದ ನಾವು ಈ ಸಹೋದರರಿಗೆ ಸಹಾಯ ಮಾಡಬೇಕು. ನಾವು ಅವರಿಗೆ ಸಹಾಯಮಾಡಿದಾಗ, ಸತ್ಯಕ್ಕೋಸ್ಕರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುಗಾರರಾಗುತ್ತೇವೆ.


ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,


ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದಾಬನನ್ನು ಸಂಧಿಸಿದನು. ಯೆಹೋನಾದಾಬನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದಾಬನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ಥನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದಾಬನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದಾಬನನ್ನು ರಥದೊಳಕ್ಕೆ ಎಳೆದುಕೊಂಡನು.


ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು.


ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.


ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು