Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:5 - ಪರಿಶುದ್ದ ಬೈಬಲ್‌

5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವಾಸ್ತ್ಯವನ್ನು ಕುಗ್ಗಿಸಿಬಿಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:5
20 ತಿಳಿವುಗಳ ಹೋಲಿಕೆ  

ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.”


ಯಾಕೆಂದರೆ ಆ ಜನಾಂಗಗಳು ಯಾಕೋಬ್ಯರನ್ನೂ ಅವರ ದೇಶವನ್ನೂ ನಾಶಮಾಡಿದರು.


ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.


ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.


ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.


ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು