Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:10 - ಪರಿಶುದ್ದ ಬೈಬಲ್‌

10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:10
18 ತಿಳಿವುಗಳ ಹೋಲಿಕೆ  

ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.


“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.


ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.


ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು