Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 96:3 - ಪರಿಶುದ್ದ ಬೈಬಲ್‌

3 ಆತನ ಮಹಿಮೆಯನ್ನು ಜನಾಂಗಗಳಿಗೆ ಪ್ರಕಟಿಸಿರಿ. ಆತನ ಅಮೋಘ ಕಾರ್ಯಗಳ ಕುರಿತು ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 96:3
15 ತಿಳಿವುಗಳ ಹೋಲಿಕೆ  

ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.


ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.


ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು