Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:10 - ಪರಿಶುದ್ದ ಬೈಬಲ್‌

10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:10
38 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ಯೆಹೋವನು ತನ್ನನ್ನು ಪ್ರೀತಿಸುವ ಪ್ರತಿಯೊಬ್ಬರನ್ನೂ ಸಂರಕ್ಷಿಸುವನು, ದುಷ್ಟರನ್ನಾದರೋ ಆತನು ನಾಶಮಾಡುವನು.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)


ಆತನು ನ್ಯಾಯವಂತರನ್ನು ಕಾಪಾಡುತ್ತಾನೆ; ತನ್ನ ಪವಿತ್ರ ಜನರಿಗೆ ಕಾವಲಾಗಿರುತ್ತಾನೆ.


ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.


ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ.


ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ನಾನು ದುರಾವಸ್ಥೆಗೆ ಒಳಗಾಗಿದ್ದೇನೆ. ನನಗೆ ಮರಣವನ್ನು ತರುವ ಈ ದೇಹದಿಂದ ನನ್ನನ್ನು ರಕ್ಷಿಸುವವರು ಯಾರು?


ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.


ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.


ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು.


ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು