Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:2 - ಪರಿಶುದ್ದ ಬೈಬಲ್‌

2 ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:2
18 ತಿಳಿವುಗಳ ಹೋಲಿಕೆ  

ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.


ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.


ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.


ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.


ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಸಂಕಲ್ಪಗಳು ಎಷ್ಟೋ ಇವೆ.


ದೇವರು ತನ್ನ ಮೋಡಗಳನ್ನು ಹರಡಿ ಪೂರ್ಣಚಂದ್ರನನ್ನು ಮರೆಮಾಡುವನು.


ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು