Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:9 - ಪರಿಶುದ್ದ ಬೈಬಲ್‌

9 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:9
11 ತಿಳಿವುಗಳ ಹೋಲಿಕೆ  

ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.


ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು