Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:7 - ಪರಿಶುದ್ದ ಬೈಬಲ್‌

7 ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:7
12 ತಿಳಿವುಗಳ ಹೋಲಿಕೆ  

ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.


ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.


ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.


ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.


ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.


ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು