Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:10 - ಪರಿಶುದ್ದ ಬೈಬಲ್‌

10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಧನಿಯಾಕ್ ಬರೆ ಹೊವ್ನ್ ಚಲುನ್, ಹರ್ ಎಕ್ ವಿಶಯಾತ್ ತೆಕಾ ಖುಶಿ ಹೊಯ್ ಸಾರ್ಕೆ ಕರುಚೆ ಮನುನ್ ತುಮಿ ಸಗ್ಳ್ಯಾ ನಮುನ್ಯಾಚೆ ಬರಿ ಕಾಮಾ ಕರಿತ್; ದೆವಾಚ್ಯಾ ಶಾನೆಪಾನಾತ್ ವಾಡುಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:10
44 ತಿಳಿವುಗಳ ಹೋಲಿಕೆ  

ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.


ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ.


ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.


ಬೇರೆ ದೇಶಗಳವರು ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತಾರೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರನ್ನು ನಿತ್ಯಕಾಲಕ್ಕೂ ಸ್ಮರಿಸುವೆವು.


ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.


ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.


ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.


ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.


ಪ್ರಭುವಿಗೆ ಯಾವುದು ಮೆಚ್ಚಿಕೆಯಾದದ್ದೆಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.


ಮಕ್ಕಳೇ, ನಿಮ್ಮ ತಂದೆತಾಯಿಗಳಿಗೆ ಎಲ್ಲಾ ವಿಷಯಗಳಲ್ಲಿಯೂ ವಿಧೇಯರಾಗಿರಿ. ಇದು ಪ್ರಭುವಿಗೆ ಸಂತೋಷವನ್ನು ಉಂಟುಮಾಡುವುದು.


ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.


ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.


ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.


ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.


ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ಮತ್ತು ನಿಮಗೆ ಅಗತ್ಯವಾದದ್ದಕ್ಕಿಂತಲೂ ಹೆಚ್ಚು ಆಶೀರ್ವಾದಗಳನ್ನು ದೇವರು ಕೊಡಬಲ್ಲನು. ಆಗ ನಿಮ್ಮಲ್ಲಿ ನಿಮಗೆ ಅಗತ್ಯವಾದ ಪ್ರತಿಯೊಂದೂ ಯಾವಾಗಲೂ ಇರುವುದು. ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಕೊಡಲು ನಿಮ್ಮಲ್ಲಿ ಸಾಕಷ್ಟು ಇರುವುದು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಅಲ್ಲದೆ ಸುನ್ನತಿ ಮಾಡಿಸಿಕೊಂಡಿರುವ ಜನರಿಗೂ ಸಹ ಅಬ್ರಹಾಮನು ತಂದೆಯಾಗಿದ್ದಾನೆ. ಆದರೆ ಅವನನ್ನು ಅವರ ತಂದೆಯನ್ನಾಗಿ ಮಾಡುವಂಥದ್ದು ಅವರ ಸುನ್ನತಿಯಲ್ಲ. ನಮ್ಮ ತಂದೆಯಾದ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವ ಮೊದಲು ಹೊಂದಿದ್ದ ನಂಬಿಕೆಗನುಸಾರವಾಗಿ ಅವರು ಜೀವಿಸಿದರೆ ಮಾತ್ರ ಅವನು ಅವರ ತಂದೆಯಾಗಿದ್ದಾನೆ.


ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.


ನಿನಗಿರುವ ಪ್ರೀತಿಯನ್ನು ಕುರಿತು ಈ ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು