Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:18 - ಪರಿಶುದ್ದ ಬೈಬಲ್‌

18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕ್ರಿಸ್ತ್ ತಾಂಡೊ ಮನ್ತಲ್ಯಾ ಆಂಗಾಕ್ ಟಕ್ಲೆ ಹೊವ್ನ್ ಹಾಯ್, ಹರಿ ಎಕ್ಬಿ ತೆಚ್ಯಾಕ್ನಾಚ್ ಯೆತಾ, ಮರ್ನಾತ್ನಾ ಅದ್ದಿ ಉಟುನ್ ಯೆಲ್ಲೊ ತೊಚ್, ತಸೆ ಹೊವ್ನ್ ಸಗ್ಳ್ಯಾಕ್ನಿ ತೊಚ್ ಅದ್ದಿಚೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:18
36 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.


ಆದರೆ ನೀವು ಈ ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರುಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ.


ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.


ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


“ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.


ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.


ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.


ನೀವೆಲ್ಲರೂ ಒಂದುಗೂಡಿ ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಅದರ ಅಂಗವಾಗಿದ್ದೀರಿ.


ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು