Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:20 - ಪರಿಶುದ್ದ ಬೈಬಲ್‌

20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ತೆನಿ ಕುರ್ಸಾರ್ ವೊತಲ್ಲ್ಯಾ ರಗ್ತಾ ವೈನಾ ಸಮಾದಾನ್ ಹಾನುನ್ ಸರ್‍ಗಾರ್ ಅನಿ ಜಮ್ನಿ ವರ್‍ತಿ ಹೊತ್ತೆ ಹರ್ ಎಕ್ಬಿ ತೆಚ್ಯಾ ವೈನಾ ರಾಜಿ ಕರುನ್ ಘೆವ್ಚೆ ಮನ್ತಲಿ ದೆವಾಚಿ ಇಚ್ಚಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:20
22 ತಿಳಿವುಗಳ ಹೋಲಿಕೆ  

ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,


ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು