Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:11 - ಪರಿಶುದ್ದ ಬೈಬಲ್‌

11 ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕ್ರಿಸ್ತಾಕ್ಡೆ ತುಮಿ ದುಸ್ರಿ ಸುನ್ನತ್ ಘೆಟ್ಲ್ಯಾಶಿ. ತಿ ಸುನ್ನತ್ ಹಾತಿನ್ ಕರಲ್ಲಿ ನ್ಹಯ್; ಕ್ರಿಸ್ತಾನ್ ಕರಲ್ಲಿ ಸುನ್ನತ್ ಮಟ್ಲ್ಯಾರ್, ತುಮ್ಚ್ಯಾ ಪಾಪಾಚ್ಯಾ ಅದಿಕಾರಾತ್ನಾ ಸುಟ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:11
22 ತಿಳಿವುಗಳ ಹೋಲಿಕೆ  

ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


“ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.


ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.


“ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:


ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ “ಯೇಸು” ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.


“ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.


ನಾನು ದುರಾವಸ್ಥೆಗೆ ಒಳಗಾಗಿದ್ದೇನೆ. ನನಗೆ ಮರಣವನ್ನು ತರುವ ಈ ದೇಹದಿಂದ ನನ್ನನ್ನು ರಕ್ಷಿಸುವವರು ಯಾರು?


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು