Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:12 - ಪರಿಶುದ್ದ ಬೈಬಲ್‌

12 ನೀವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನೊಂದಿಗೆ ಹೂಳಲ್ಪಟ್ಟಿರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸುವುದರ ಮೂಲಕ ತೋರಿದ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಆ ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಮೇಲಕ್ಕೆ ಎದ್ದುಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮಿ ಬಾಲ್ತಿಮ್ ಕರುನ್ ಘೆಟಲ್ಲ್ಯಾ ತನ್ನಾ; ಕ್ರಿಸ್ತಾಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲ್ಲೆ ಹಾಸಿ, ದೆವಾನ್ ಕ್ರಿಸ್ತಾಕ್ ಮರಲ್ಲ್ಯಾತ್ನಾ ಉಟ್ವುನ್, ದಾಕ್ವುನ್ ದಿಲ್ಲ್ಯಾ ತಾಕ್ತಿರ್ ವಿಶ್ವಾಸ್ ಥವ್ತಲ್ಯಾ ವೈನಾ, ತೆಚ್ಯಾ ವಾಂಗ್ಡಾ ವೈರ್ ಉಟ್ವುನ್ ಯೆಲ್ಲೆ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:12
31 ತಿಳಿವುಗಳ ಹೋಲಿಕೆ  

ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.


ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.


ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.


ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು