Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:7 - ಪರಿಶುದ್ದ ಬೈಬಲ್‌

7 ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕ್ರಿಸ್ತಾತ್ ತುಮಿ ಖೊಲಾತ್ ಮುಳಾ ಸೊಡುನ್, ತೆಚ್ಯಾ ಭುತ್ತುರ್ ತುಮ್ಚೆ ಜಿವನ್ ಭಾಂದುನ್ ಘೆವಾ. ಅನಿ ತುಮ್ಕಾ ಸಾಂಗಲ್ಲ್ಯಾ ಶಿಕಾಪಾಚ್ಯಾ ಸಾರ್ಕೆ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ರ್‍ಹಾವ್ನ್ ದೆವಾಕ್ ಲೈ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:7
31 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.


ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಚಿತ್ತ.


ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.


ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ.


ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.


ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು