Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:9 - ಪರಿಶುದ್ದ ಬೈಬಲ್‌

9 ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎಕಾಮೆಕಾಕ್ ಝುಟೆ ಸಾಂಗುನಕಾಸಿ, ಕಶ್ಯಾಕ್ ಮಟ್ಲ್ಯಾರ್, ತುಮಿ ತುಮ್ಚೆ ಜುನ್ನೆ ಪಾಪಾನ್ ಭರಲ್ಲೆ ಜಿವನ್ ಅನಿ ತುಮ್ಚಿ ಅದ್ಲಿ ಚಾಲ್ ಮುಳಾ ಸಮೆತ್ ಕಾಡುನ್ ಸೊಡುನ್ ಸೊಡ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:9
16 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


“ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.


ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.


ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು