Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 4:8 - ಪರಿಶುದ್ದ ಬೈಬಲ್‌

8 ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ವಿಷಯದಲ್ಲಿ ನಿಮಗೆ ಎಲ್ಲವನ್ನೂ ತಿಳಿಸಿ, ನಿಮ್ಮನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವುದಕ್ಕಾಗಿ ಆತನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ನನ್ನ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ನಮ್ಮ ಪರಿಸ್ಥಿತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಕಾರನಾಸಾಟ್ನಿಚ್ ಮಿಯಾ ತೆಕಾ ಧಾಡುನ್ ದಿವ್ಕ್ ಲಾಗ್ಲಾ, ಅಮಿ ಕಶೆ ಹಾಂವ್ ಮನುನ್, ತುಮ್ಕಾಬಿ ಕಳುಚೆ ಮನ್ತಲಿ ಮಾಜಿ ಆಶಾ, ತುಮ್ಕಾ ಉಮ್ಮೆದ್ ಭರುಕ್ ಮನುನ್ ಮಿಯಾ ತೆಕಾ ಓನೆಜಿಮಸ್ ಮನ್ತಲ್ಯಾಚ್ಯಾ ವಾಂಗ್ಡಾ ಧಾಡುನ್ ದಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 4:8
16 ತಿಳಿವುಗಳ ಹೋಲಿಕೆ  

ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ಆದ್ದರಿಂದ ಒಬ್ಬರನ್ನೊಬ್ಬರು ಸಂತೈಸಿ ಬಲಪಡಿಸಿರಿ. ಈಗ ನೀವು ಮಾಡುತ್ತಿರುವುದು ಅದನ್ನೇ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ತಂದೆಯು ತನ್ನ ಸ್ವಂತ ಮಕ್ಕಳೊಡನೆ ನಡೆದುಕೊಳ್ಳುವಂತೆ ನಿಮ್ಮಲ್ಲಿ ಪ್ರತಿಯೊಬ್ಬರೊಡನೆಯೂ ನಡೆದುಕೊಂಡೆವೆಂಬುದು ನಿಮಗೆ ತಿಳಿದಿದೆ.


ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.


ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು