Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:14 - ಪರಿಶುದ್ದ ಬೈಬಲ್‌

14 ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುದೆವಾಂಚ್ಯಾ ಲೊಕಾತ್ನಿ ದೆವ್ ಧರ್ಮಾಚ್ಯಾ ಕಾಮಾತ್ ಫಿಡೆ ಹೊತ್ತೊ, ಅನಿ ಅಮ್ಚ್ಯಾ ವಾಡ್ ವಡ್ಲಾಂಚಿ ಪದ್ದತ್ ಲೈ ಹುರ್ಪೆನ್ ಮಿಯಾ ಪಾಳುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:14
15 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


“ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.


ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”


ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


“ಹಸಿಯಾದ ಚರ್ಮವು ಬದಲಾಗಿ ಬಿಳಿಯಾದರೆ, ಆಗ ಆ ವ್ಯಕ್ತಿ ಯಾಜಕನ ಬಳಿಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು