Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:19 - ಪರಿಶುದ್ದ ಬೈಬಲ್‌

19 ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಥೈ ಧನಿಯಾಚೊ ಭಾವ್ ಜಾಕೊಬಾಕ್ ಸೊಡುನ್ ದುಸ್ರೊ ಖಲೊಬಿ ಅಪೊಸ್ತಲ್ ಮಾಕಾ ಬಗುಕ್ ಗಾವುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:19
12 ತಿಳಿವುಗಳ ಹೋಲಿಕೆ  

ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.


ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.


ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ


ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


“ನಿನ್ನ ತಾಯಿ ಮತ್ತು ತಮ್ಮಂದಿರು ಹೊರಗೆ ನಿಂತಿದ್ದಾರೆ. ಅವರು ನಿನ್ನನ್ನು ನೋಡಬೇಕೆಂದಿದ್ದಾರೆ” ಎಂದು ಯೇಸುವಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು