Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:21 - ಪರಿಶುದ್ದ ಬೈಬಲ್‌

21 ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಚ್ಯಾ ಮಾನಾ ಮಿಯಾ ಸಿರಿಯಾ ದೆಶಾಚ್ಯಾ ಪ್ರಾಂತ್ಯಾಕ್ನಿ ಅನಿ ಸಿಲಿಸಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:21
12 ತಿಳಿವುಗಳ ಹೋಲಿಕೆ  

ಪೌಲ ಸೀಲರು ಸಿರಿಯಾ ಮತ್ತು ಸಿಲಿಸಿಯ ನಾಡುಗಳಲ್ಲಿ ಹಾದು ಹೋಗುತ್ತಾ ಅಲ್ಲಿದ್ದ ಸಭೆಗಳಿಗೆ ಬಲವಾಗಿ ಬೆಳೆಯಲು ನೆರವು ನೀಡಿದರು.


ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.


ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.


ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.


ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.


ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.


ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.


ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು