Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:19 - ಪರಿಶುದ್ದ ಬೈಬಲ್‌

19 ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನಂತೂ ದೇವರಿಗಾಗಿ ಜೀವಿಸುವದಕ್ಕೋಸ್ಕರ ಧರ್ಮಪ್ರಮಾಣದ ಮೂಲಕವಾಗಿ ಧರ್ಮಪ್ರಮಾಣದ ಪಾಲಿಗೆ ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ದೆವಾಸಾಟ್ನಿ ಮಿಯಾ ಜಿವನ್ ಕರುಸಾಟಿ ಖಾಯ್ದ್ಯಾಚ್ಯಾ ವೈನಾ ಖಾಯ್ದ್ಯಾಕ್ ಮಿಯಾ ಮರ್‍ಲಾ ಅನಿ ಹೆಚ್ಯಾ ವೈನಾ ಕ್ರಿಸ್ತಾಚ್ಯಾ ವಾಂಗ್ಡಾ ಮಾಕಾ ಕುರ್ಸಾರ್ ಮಾರುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:19
28 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.


ಇಲ್ಲ! ನಾವು ನಮ್ಮ ಹಿಂದಿನ ಪಾಪಮಯ ಜೀವಿತಗಳ ಪಾಲಿಗೆ ಸತ್ತುಹೋದೆವು. ಹೀಗಿರಲು, ನಾವು ಪಾಪದಲ್ಲೇ ಜೀವಿಸಲು ಹೇಗೆ ಸಾಧ್ಯ?


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ಅದೇ ರೀತಿಯಲ್ಲಿ ನೀವು ಸಹ ನಿಮ್ಮನ್ನು ಪಾಪದ ಶಕ್ತಿಯ ಪಾಲಿಗೆ ಸತ್ತವರೆಂದು ಮತ್ತು ಕ್ರಿಸ್ತ ಯೇಸುವಿನ ಮೂಲಕ ದೇವರಿಗಾಗಿ ಜೀವಿಸುವವರೆಂದು ಪರಿಗಣಿಸಿರಿ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಪಾಪವು ನಿಮ್ಮ ಒಡೆಯನಾಗಿರುವುದಿಲ್ಲ. ಏಕೆಂದರೆ, ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ಈಗ ನೀವು ದೇವರ ಕೃಪೆಯಲ್ಲಿ ಜೀವಿಸುವವರಾಗಿದ್ದೀರಿ.


ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ನೀವು ಕ್ರಿಸ್ತನೊಂದಿಗೆ ಸತ್ತು ಪ್ರಾಪಂಚಿಕವಾದ ನಿರರ್ಥಕ ನಿಯಮಗಳಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿದ್ದರೂ ನೀವು ಈ ಲೋಕಕ್ಕೆ ಸೇರಿದವರಂತೆ ವರ್ತಿಸುವುದೇಕೆ? ಈ ನಿಯಮಗಳನ್ನು ಏಕೆ ಅನುಸರಿಸುತ್ತಿರುವಿರಿ ಎಂಬುದೇ ನನ್ನ ಮಾತಿನ ಅರ್ಥ:


ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.


ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು