Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:2 - ಪರಿಶುದ್ದ ಬೈಬಲ್‌

2 ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:2
26 ತಿಳಿವುಗಳ ಹೋಲಿಕೆ  

ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)


ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.


ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ಆದ್ದರಿಂದ ಗುರಿಯನ್ನು ಹೊಂದಿರುವ ವ್ಯಕ್ತಿಯಂತೆ ಓಡುತ್ತೇನೆ. ಕೇವಲ ಗಾಳಿಯನ್ನು ಗುದ್ದದೆ, ನಿಜವಾಗಿಯೂ ಗುದ್ದಿ ಮುಷ್ಠಿಕಾಳಗ ಮಾಡುವ ವ್ಯಕ್ತಿಯಂತೆ ಹೋರಾಡುತ್ತೇನೆ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ಓಟದ ಸ್ಪರ್ಧೆಯಲ್ಲಿ ಎಲ್ಲಾ ಓಟಗಾರರು ಓಡುತ್ತಾರೆಂಬುದು ನಿಮಗೆ ಗೊತ್ತಿದೆ. ಆದರೆ ಅವರಲ್ಲಿ ಒಬ್ಬನು ಮಾತ್ರ ಬಹುಮಾನವನ್ನು ಪಡೆದುಕೊಳ್ಳುತ್ತಾನೆ. ಆದ್ದರಿಂದ ಆ ರೀತಿಯಲ್ಲಿ ಓಡಿರಿ; ಗೆಲ್ಲುವುದಕ್ಕಾಗಿ ಓಡಿರಿ.


ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.


ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ಒಂದು ರಾತ್ರಿ ಪೌಲನಿಗೆ ದರ್ಶನವಾಯಿತು. ಪ್ರಭುವು ಅವನಿಗೆ, “ಭಯಪಡಬೇಡ! ಜನರಿಗೆ ಬೋಧಿಸುತ್ತಲೇ ಇರು, ನಿಲ್ಲಿಸಬೇಡ!


ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಸತ್ತ ನೊಣಗಳಿಂದ ಉತ್ತಮವಾದ ಪರಿಮಳತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹುಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.


ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.


ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.


ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.


ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.


ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು