Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:21 - ಪರಿಶುದ್ದ ಬೈಬಲ್‌

21 ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚಿ ಕುರ್ಪಾ ನಕ್ಕೊ ಮನುಕ್ ಮಿಯಾ ತಯಾರ್ ನಾ, ಕಶ್ಯಾಕ್ ಮಟ್ಲ್ಯಾರ್ ಖಾಯ್ದ್ಯಾಚ್ಯಾ ವೈನಾ ಮಾನುಸ್ ನಿತಿವಂತ್ ಹೊತಾ ಹೊಲ್ಯಾರ್, ಕ್ರಿಸ್ತ್ ಮರಲ್ಲೆ ಕಾಯ್ಬಿ ಫಾಯ್ದ್ಯಾಚೆ ನ್ಹಯ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:21
16 ತಿಳಿವುಗಳ ಹೋಲಿಕೆ  

ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.


ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.


ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.


ಆದರೆ ನಾನು ತೊರೆದುಬಿಟ್ಟ ಆ ಸಂಗತಿಗಳನ್ನು ಮತ್ತೆ ಬೋಧಿಸಲಾರಂಭಿಸಿದರೆ ನಿಜವಾಗಿಯೂ ತಪ್ಪು ಮಾಡಿದವನಾಗುತ್ತೇನೆ.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ನಂತರ ಯೇಸು ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದಕ್ಕಾಗಿ ದೇವರ ಆಜ್ಞೆಗಳನ್ನು ತಿರಸ್ಕರಿಸುವುದರಲ್ಲಿ ನಿಪುಣರಾಗಿದ್ದೀರಿ!


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ಕ್ರಿಸ್ತನು ಜೀವಂತವಾಗಿ ಎಬ್ಬಿಸಲ್ಪಟ್ಟಿಲ್ಲದಿದ್ದರೆ, ನಿಮ್ಮ ನಂಬಿಕೆಯು ನಿಷ್ಪ್ರಯೋಜಕವಾಗಿದೆ ಮತ್ತು ನೀವು ನಿಮ್ಮ ಪಾಪಗಳಿಂದ ಇನ್ನೂ ಅಪರಾಧಿಗಳಾಗಿದ್ದೀರಿ.


“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು