Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:6 - ಪರಿಶುದ್ದ ಬೈಬಲ್‌

6 ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರು ಮುಖದಾಕ್ಷಿಣ್ಯ ಮಾಡುವವನಲ್ಲ. ಮಾನಿಷ್ಠರೆನಿಸಿಕೊಂಡವರು ನನ್ನ ಮಾತಿಗೆ ಒಪ್ಪಿದರೇ ಹೊರತು ನನಗೇನೂ ಕಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಕೊನ್ ಲೈ ಮೊಟೆ ಮನುನ್ ಘೆಟಲ್ಲೆ ತೆ, ಅದ್ದಿ ಮೊಟೆ ಅಸ್ತಿಲ್, ತೆ ಮಾಕಾ ಸಮಂದ್ ಪಡಲ್ಲೆ ನಾ, ಕಶ್ಯಾಕ್ ಮಟ್ಲ್ಯಾರ್, ದೆವ್ ತೊಂಡ್ ಬಗುನ್ ನ್ಯಾಯ್ ನಿರ್ನಯ್ ಕರಿನಾ, ಮಾಜ್ಯಾ ಶಿಕಾಪಾಚ್ಯಾ ವಿಶಯಾತ್ ತೆನಿ ಅನಿ ಕಾಯ್ಬಿ ಜಾಸ್ತಿಚೆ ಮಾಕಾ ಸಾಂಗುಕ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:6
22 ತಿಳಿವುಗಳ ಹೋಲಿಕೆ  

ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.


ಪೇತ್ರನು ಮಾತಾಡಲಾರಂಭಿಸಿ ಹೀಗೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.


ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.


ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ಆ “ಮಹಾ ಅಪೊಸ್ತಲರು” ನನಗಿಂತ ಮಿಗಿಲಾದವರೆಂದು ನಾನು ಭಾವಿಸುವುದಿಲ್ಲ.


ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ.


ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!


ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.


ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.


ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು