Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:7 - ಪರಿಶುದ್ದ ಬೈಬಲ್‌

7 ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಬದ್ಲಾಕ್ ಕಶೆ ಸುನ್ನತ್ ಕರಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲೆ ಕಾಮ್ ಪೆದ್ರುಕ್ ಗಾವ್ಲಾ, ತಸೆಚ್ ಸುನ್ನತ್ ಕರಿನಸಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲಿ ಕಾಮ್ ಮಾಕಾ ಗಾವ್ಲಾ ಮನುನ್ ತೆನಿ ಸಗ್ಳ್ಯಾನಿ ಒಪ್ಪುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:7
20 ತಿಳಿವುಗಳ ಹೋಲಿಕೆ  

ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆಂದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿಂದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.


ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.


ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.


ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.


ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು.


ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು