Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:10 - ಪರಿಶುದ್ದ ಬೈಬಲ್‌

10 ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:10
18 ತಿಳಿವುಗಳ ಹೋಲಿಕೆ  

“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಬಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”


ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.


ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು