Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:11 - ಪರಿಶುದ್ದ ಬೈಬಲ್‌

11 ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಕರ್ಮಮಾರ್ಗದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖಾಯ್ದ್ಯಾಂಚ್ಯಾ ವೈನಾ ಕೊನ್‍ಬಿ ನಿತಿವಂತ್ ಹೊಯ್ನಾ ಮನ್ತಲೆ ಕಳುನ್‍ ಯೆಲೆ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಥವಲ್ಲೊ ಮಾನುಸ್, ಫಕತ್ ವಿಶ್ವಾಸಾ ವೈನಾ ಯೆವ್ಡೆಚ್ ಝಿತ್ತೊ ರ್‍ಹಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:11
20 ತಿಳಿವುಗಳ ಹೋಲಿಕೆ  

ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


“ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.


ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.


“ನಿನ್ನ ಜನರು ನಿನ್ನ ವಿರುದ್ಧ ಪಾಪ ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯೂ ಪಾಪಮಾಡುತ್ತಾನೆಂಬುದು ನನಗೆ ತಿಳಿದಿದೆ. ನಿನ್ನ ಜನರ ಬಗ್ಗೆ ನೀನು ಕೋಪದಿಂದಿರುವೆ. ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಮಾಡುವೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಕೆಲವು ದೂರದೇಶಗಳಿಗೆ ಸಾಗಿಸುವರು.


ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು