ಗಲಾತ್ಯದವರಿಗೆ 3:12 - ಪರಿಶುದ್ದ ಬೈಬಲ್12 ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಕರ್ಮಮಾರ್ಗಕ್ಕೆ ನಂಬಿಕೆಯು ಆಧಾರವಲ್ಲ, ಅದರ ನೇಮಗಳನ್ನು ಆಚರಿಸಿದವನೇ ಅವುಗಳ ಮೂಲಕ ಬದುಕುವನು ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಖರೆ ಖಾಯ್ದ್ಯಾಕ್ನಿ ಅನಿ ವಿಶ್ವಾಸಾಕ್ ಕಾಯ್ಬಿ ಸಮಂದ್ ನಾ, ತೆಚ್ಯಾ ಬದ್ಲಾಕ್ ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ಖಾಯ್ದ್ಯಾಕ್ ಪಾಜೆ ಹೊಲ್ಲೆ ಸಗ್ಳೆ ಕರ್ತಾ, ತೊ ಝಿತ್ತೊ ರ್ಹಾತಾ,” ಅಧ್ಯಾಯವನ್ನು ನೋಡಿ |
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.