Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:15 - ಪರಿಶುದ್ದ ಬೈಬಲ್‌

15 ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಹೋದರರೇ, ಲೋಕದ ವ್ಯವಹಾರವನ್ನು ಹಿಡಿದು ಮಾತಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ, ಅದಕ್ಕೆ ಹೆಚ್ಚು ಮಾತುಗಳನ್ನು ಕೂಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಎಕ್ ಉದಾರನ್ ದಿತಾ ಎಕ್ಲೊ ಅನಿ ಎಕ್ಲ್ಯಾ ವಾಂಗ್ಡಾ ಗೊಸ್ಟ್ ದಿತಲ್ಯಾ ವಿಶಯಾತ್ ಚಿಂತುನ್ ಬಗಾ, ದೊಗೆ ಜಾನಾನಿ ಎಕ್ ಕರಾರಾಕ್ ತಯಾರ್ ಹೊವ್ನ್ ತೆನಿ ಸಹಿ ಘಾಟಲ್ಲ್ಯಾ ತನ್ನಾ ಕೊನ್‍ಬಿ ತೆ ಮೊಡುಕ್ ಹೊಯ್ನಾ, ನಾಜಾಲ್ಯಾರ್ ತೆಕಾ ಕಾಯ್ಬಿ ಜಾಸ್ತಿಚೆ ಮಿಳ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:15
10 ತಿಳಿವುಗಳ ಹೋಲಿಕೆ  

ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


ನನ್ನ ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲೆಂದು ಪ್ರಾರ್ಥಿಸುತ್ತೇನೆ. ಆಮೆನ್.


ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.


ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.


ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು