Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:28 - ಪರಿಶುದ್ದ ಬೈಬಲ್‌

28 ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ರ್‍ಹಾತಾನಾ, ಜುದೆವ್ ಅನಿ ಗ್ರಿಕ್ ಅಸಲ್ಲ್ಯಾಂಚ್ಯಾ ಮದ್ದಿ ಗುಲಾಮ್ ಅನಿ ಸ್ವತಂತ್ರ್ ಅಸಲ್ಲ್ಯಾ ಮದ್ದಿ ಘೊವ್ಮಾನ್ಸಾ ಅನಿ ಬಾಯ್ಕೊಮಾನ್ಸಾಂಚ್ಯಾ ಮದ್ದಿ ಕಸ್ಲೊಬಿ ಬೆದ್‍ ನಾ ತುಮಿ ಸಗ್ಳೆ ಜಾನಾ ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಎಕ್ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:28
31 ತಿಳಿವುಗಳ ಹೋಲಿಕೆ  

ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.


ನಾವೇ ಆ ಜನರು. ದೇವರಿಂದ ಕರೆಯಲ್ಪಟ್ಟ ಜನರು ನಾವೇ. ದೇವರು ನಮ್ಮನ್ನು ಯೆಹೂದ್ಯರೊಳಗಿಂದ ಮತ್ತು ಯೆಹೂದ್ಯರಲ್ಲದವರೊಳಗಿಂದ ಕರೆದನು.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.


ಆ ಸಮಯದಲ್ಲಿ ಸೇವಕಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.


ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.


ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.


ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.


ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು