Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:16 - ಪರಿಶುದ್ದ ಬೈಬಲ್‌

16 ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವದರಿಂದ ನಿಮಗೆ ಶತ್ರುವಾಗಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಖರೆ ಸಾಂಗ್ತಲ್ಯಾಸಾಟ್ನಿ; ಅತ್ತಾ ತುಮ್ಚೊ ವೈರಿ ಹೊಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:16
17 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು.


ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?


“ನಾನು ಸತ್ಯವನ್ನು ಹೇಳುತ್ತೇನೆ. ಆದರೆ ನೀವು ನನ್ನನ್ನು ನಂಬುವುದಿಲ್ಲ.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ.


ನಿಮ್ಮನ್ನು ಒತ್ತಾಯಪಡಿಸುವುದಕ್ಕಾಗಿ ಆ ಜನರು ಪ್ರಯಾಸ ಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಒಳ್ಳೆಯ ಉದ್ದೇಶದಿಂದಲ್ಲ. ನೀವು ನಮಗೆ ವಿರುದ್ಧವಾಗಿ ತಿರುಗಿಬೀಳಬೇಕೆಂದು ಅವರು ನಿಮ್ಮನ್ನು ಒತ್ತಾಯಪಡಿಸುತ್ತಿದ್ದಾರೆ. ನೀವು ಅವರನ್ನೇ ಹೊರತು ಬೇರೆ ಯಾರನ್ನೂ ಅನುಸರಿಸಬಾರದೆಂಬುದು ಅವರ ಅಪೇಕ್ಷೆ. ನಿಮ್ಮ ವಿಷಯದಲ್ಲಿ ಜನರು ಆಸಕ್ತಿ ತೋರಿಸುವುದೇನೋ ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು