Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:24 - ಪರಿಶುದ್ದ ಬೈಬಲ್‌

24 ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹಿ ಸಂಗ್ತಿಯಾ ಪ್ರತಿ ರುಪಾಚ್ಯಾ ರಿತಿನ್ ಕಳ್ವುನ್ ಘೆವ್ಕ್ ಹೊತಾ: ದೊನ್‍ ಬಾಯ್ಕೊಮಾನ್ಸಾ ದೊನ್ ಕರಾರಾ ದಾಕ್ವುನ್ ದಿತ್ಯಾತ್, ಜೆ ಕೊನಾಚಿ ಪೊರಾ ಗುಲಾಮಪಾನಾತ್ ಜಲಮ್ಲಾತ್ ತಿ ಹಾಗಾರಾ ಅನಿ ತಿ ಸಿನಾಯ್ ಮಡ್ಡಿ ವರ್‍ತಿ ಕರಲ್ಲೊ ಕರಾರ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:24
24 ತಿಳಿವುಗಳ ಹೋಲಿಕೆ  

ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.)


ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.


ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.


ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು