Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:9 - ಪರಿಶುದ್ದ ಬೈಬಲ್‌

9 ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತರಿಬಿ ಖರ್‍ಯಾ ದೆವಾಕ್ ಕಳ್ವುನ್ ಘೆಟ್ಲ್ಯಾಶಿ, ಖರೆ ಸಾಂಗುಚೆ ಹೊಲ್ಯಾರ್ ತುಮ್ಕಾ ಕಳ್ವುನ್ ಘೆಟಲ್ಲೆ ದೆವಾನುಚ್, ಅಶೆ ರ್‍ಹಾತಾನಾ, ತುಮಿ ಅದ್ದಿಚ್ಯಾನ್ ಪಾಳುನ್ಗೆತ್ ಯೆಲ್ಲ್ಯಾ ಬಳ್ ನಸಲ್ಲ್ಯಾ ಅನಿ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾಕ್ನಿ ಕಶ್ಯಾಕ್ ಫಾಟಿ ಪರ್ತುನ್ ಜಾವ್ಚೆ? ತೆಂಕಾ ಅನಿಪರ್ತುನ್ ಗುಲಾಮ್ ಹೊವ್ಚೆ ಮನುನ್ ಕರ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:9
30 ತಿಳಿವುಗಳ ಹೋಲಿಕೆ  

ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ!


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.


ಹಳೆಯ ನಿಯಮವು ದುರ್ಬಲವೂ ನಿಷ್ಪ್ರಯೋಜಕವೂ ಆಗಿದ್ದರಿಂದ ರದ್ದಾಯಿತು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಆಗ ನೀನು ಯೆಹೋವನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವೆ; ದೈವಜ್ಞಾನವನ್ನು ಹೊಂದಿಕೊಳ್ಳುವೆ.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು.


ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ಅದೇ ರೀತಿಯಲ್ಲಿ ನಾವು ಮೊದಲು ಮಕ್ಕಳಂತಿದ್ದೆವು. ಈ ಪ್ರಪಂಚದ ಉಪಯೋಗವಿಲ್ಲದ ನಿಯಮಗಳಿಗೆ ನಾವು ಗುಲಾಮರಾಗಿದ್ದೆವು.


ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ದ್ರಾಕ್ಷಾರಸದ ಚೀಲಗಳಲ್ಲಿ ತುಂಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು