Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:15 - ಪರಿಶುದ್ದ ಬೈಬಲ್‌

15 ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಎಕ ಮಾನ್ಸಾಕ್ ಸುನ್ನತ್ ಹೊಲಾ ಕಾಯ್ ನಾ ಮನ್ತಲೆ ಮುಖ್ಯ ನ್ಹಯ್, ನ್ಹವ್ಯಾನ್ ರಚುನ್ ಹೊತೆಲೆ ಮೊಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:15
14 ತಿಳಿವುಗಳ ಹೋಲಿಕೆ  

ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.


ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.


ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.


ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.


ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು